ಉಡುಪಿ

ಕಾಮಿಡಿ ಕಿಲಾಡಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ

ಉಡುಪಿ:- ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಮೆಹಂದಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದಾಗ ಹೃದಯಾಘಾತಕ್ಕೆ ಒಳಗಾದ ಕಾಮಿಡಿ ಕಿಲಾಡಿಯ ರಾಕೇಶ್ ಪೂಜಾರಿ ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ವಿಪರ್ಯಾಸವೆಂದರೆ ರಾಕೇಶ್ ಇತ್ತೀಚೆಗಷ್ಟೇ ಕಾಂತಾರ ಸಿನಿಮಾ ಶೂಟಿಂಗ್ ಮುಗಿಸಿ ಬಂದಿದ್ದರು, ಹೀಗಾಗಿ ಈಗ ಕಾಂತಾರ ಸಿನಿಮಾ ಮೇಲೆ ಮತ್ತೊಂದು ಅಪವಾದ ಬಂದಿದೆ. ಮೊನ್ನೆಯಷ್ಟೇ ಕಾಂತಾರ ಸಿನಿಮಾದ ಜ್ಯೂನಿಯರ್ ಕಲಾವಿದರೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಇದೀಗ ರಾಕೇಶ್ ಪೂಜಾರಿ ಸಾವನ್ನಪ್ಪಿರುವವ ಬೆನ್ನಲ್ಲೇ ಕಾಂತಾರ ಸಿನಿಮಾದ ಅಪಶಕುನವೇ ಎಂಬ ಸುದ್ದಿ ಹಬ್ಬಿದೆ.