ದಕ್ಷಿಣ ಕನ್ನಡ

ಸುಹಾಸ್ ಹತ್ಯೆ: ಸ್ಪೀಕರ್ ಖಾದರ್ ಉತ್ತರ ಹೇಗಿತ್ತು ಗೊತ್ತಾ

ಮಂಗಳೂರು:- ಸುಹಾಸ್ ಹತ್ಯೆ ಬಳಿಕ ಮಂಗಳೂರಿನಲ್ಲಿ ಈಗ ಪ್ರಕ್ಷುಬದ್ಧ ವಾತಾವರಣವಿದ್ದು, ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

ಈ ಘಟನೆ ಬಗ್ಗೆ ಇಂದು ಸ್ಪೀಕರ್ ಯುಟಿ ಖಾದರ್ ಫರೀದ್ ರವರಿಗೆ ಮಾಧ್ಯಮಗಳು ಪ್ರಶ್ನೆ ಮಾಡಿ, ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ನಾವು ಅಧಿಕಾರಕ್ಕೆ ಬಂದರೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುತ್ತೇವೆ ಎಂದಿದ್ದಿರಿ. ಆದರೆ, ಈಗ ಕಾಂಗ್ರೆಸ್ ಅವಧಿಯಲ್ಲೂ ಇಂತಹ ಘಟನೆ ನಡೆಯುತ್ತಿದೆಯಲ್ಲಾ ಸಾರ್ ಎಂದು ಪ್ರಶ್ನೆ ಮಾಡಿದಾಗ ಇದಕ್ಕೆ ಉತ್ತರಿಸಿರುವ ಸ್ಪೀಕರ್ ಖಾದರ್ “ನೋಡಿ ನಾನೀಗ ಸ್ಪೀಕರ್ ಸ್ಥಾನದಲ್ಲಿರುವವನು. ರಾಜ್ಯ ಸರ್ಕಾರದ ಸಂಬಂಧಿತ ಸಚಿವರು ಅದನ್ನೆಲ್ಲವನ್ನೂ ನೋಡಿಕೊಳ್ಳುತ್ತಾರೆ. ಒಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿರಬೇಕು ಎಂದೇ ನಾನು ಬಯಸುವವನು. ನಮ್ಮ ನಗರ ಪ್ರಾಕೃತಿಕವಾಗಿ ಸುಂದರ ನಗರ. ಅದನ್ನು ಕಾಪಾಡಿಕೊಳ್ಳಬೇಕು. ಇಂತಹ ಗಲಭೆಗಳು ಆಗದಂತೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.