ಬೆಂಗಳೂರು:- ಸಂಸದರಾದ ಪಿ.ಸಿ ಮೋಹನ್ ಅವರು ತಮ್ಮ ಎಕ್ಸ್ ಖಾತೆ ಮೂಲಕ ಜಿಹಾದಿಗಳು ಸುಹಾಸ್ ಶೆಟ್ಟಿಯನ್ನು ಕ್ರೂರವಾಗಿ ಹತ್ಯೆ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಸುಹಾಸ್ ಶೆಟ್ಟಿ ಮನೆಗೆ ಒಬ್ಬ ಕಾಂಗ್ರೆಸ್ ನಾಯಕನೂ ಭೇಟಿ ನೀಡಿ ಸಾಂತ್ವನ ಹೇಳಿಲ್ಲ. ಆದರೆ, ಸುಹಾಸ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆದಿಲ್ನನ್ನು ಭೇಟಿ ಮಾಡಲು ಅವರಿಗೆ ಸಮಯ ಸಿಕ್ಕಿದೆ ಎಂದು ಎಂಎಲ್ಸಿಗಳಾದ ಬಿ.ಕೆ.ಹರಿಪ್ರಸಾದ್, ಮಂಜುನಾಥ್ ಭಂಡಾರಿ, ಮಾಜಿ ಸಚಿವ ರಮನಾಥ್ ರೈ ಮುಂತಾದ ಕಾಂಗ್ರೆಸ್ ಮುಖಂಡರು ಆದಿಲ್ ಮನೆಗೆ ಭೇಟಿ ನೀಡಿರುವ ಫೋಟೋವನ್ನು ಶೇರ್ ಮಾಡಿ ಕುಟುಕಿದ್ದಾರೆ.
ಮತ ಬ್ಯಾಂಕ್ಗಳು ಚಾಲಕನ ಸ್ಥಾನದಲ್ಲಿರುವಾಗ ನ್ಯಾಯವು ಹಿಂದೆ ಸರಿಯುತ್ತದೆ. ಕಾಂಗ್ರೆಸ್ಗೆ ವೋಟ್ ಬ್ಯಾಂಕ್ ಮುಖ್ಯ ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.